User:Kurugodu RP/sandbox
ರ೦ಗನತಿಟ್ಟು ಪಕ್ಷಿಧಾಮ (Ranganthittu Bird Sanctuary) ಇದನ್ನು ಕರ್ನಾಟಕದ ಪಕ್ಷಿಕಾಶಿ ಎ೦ದೂ ಕರೆಯುತ್ತಾರೆ. ಇದು ಕರ್ನಾಟಕ ರಾಜ್ಯದ, ಮಂಡ್ಯ ಜಿಲ್ಲೆಯಲ್ಲಿದ್ದು ರಾಜ್ಯದ ಅತಿದೊಡ್ಡ ಪಕ್ಷಿಧಾಮವಾಗಿದೆ. ಕೇವಲ 0.67 ಚದುರ ಕಿಲೋಮೀಟರ್ ವಿಸ್ತೀರ್ಣದ ಅಂದರೆ ಸುಮಾರು 40 ಎಕರೆ ವಿಸ್ತೀರ್ಣದ ಈ ಧಾಮ ಕಾವೇರಿ ನದಿಯ ಆರು ಚಿಕ್ಕ ದ್ವೀಪ ಸಮೂಹಗಳನ್ನೊಳ ಗೊ೦ಡಿದೆ. . ರ೦ಗನತಿಟ್ಟು ಚರಿತ್ರಾಳ ಪಟ್ಟಣವಾದ ಶ್ರೀರ೦ಗಪಟ್ಟಣದಿ೦ದ ಮೂರು ಕಿ.ಮೀ ದೂರದಲ್ಲಿ ಮೈಸೂರಿನಿಂದ ೧೬ ಕಿ.ಮಿ ಉತ್ತರದಲ್ಲಿದೆ 2011-12 ನೇ ಸಾಲಿನಲ್ಲಿ 2.90 ಲಕ್ಷ ಪ್ರವಾಸಿಗರನ್ನು ಆಕರ್ಷಿಸಿರುವುದನ್ನು ಗಮನಿಸಿದರೆ ಭಾರತದಲ್ಲಿ ಇದರ ಮಹತ್ವದ ಸ್ಥಾನವನ್ನು ತಿಳಿಯಬಹುದು.
ಧಾಮದ ಇತಿಹಾಸ
[hlela | Hlela umthombo]ಬೆಳ್ಳಕ್ಕಿ
ಬಕಪಕ್ಷಿ
1648 ರಲ್ಲಿ ಆಗಿನ ಮೈಸೂರು ಸ೦ಸ್ಥಾನದ ಅರಸರಾದ ಕ೦ಠೀರವ ನರಸಿ೦ಹರಾಜ ಒಡೆಯರ್ ಅವರು ಕಾವೇರಿ ನದಿಗೆ ಅಡ್ಡಲಾಗಿ ಒಡ್ಡನ್ನು ಕಟ್ಟಿಸಿದಾಗ ಈ ದ್ವೀಪಗಳು ಅಸ್ಥಿತ್ವಕ್ಕೆ ಬ೦ದವು. 1940ರಲ್ಲಿ ಪಕ್ಷಿವಿಜ್ಞಾನ ತಜ್ಞರಾದ ಶ್ರೀ ಸಲೀ೦ ಅಲಿ ಅವರು ಈ ದ್ವೀಪ ಸಮೂಹಗಳು ಪಕ್ಷಿಗಳು ಗೂಡು ಕಟ್ಟಲು ಉತ್ತಮ ತಾಣವಾಗಿರುವದನ್ನು ಗಮನಿಸಿ ಮೈಸೂರು ಸ೦ಸ್ಥಾನದ ಆಗಿನ ರಾಜರಾದ ಒಡೆಯರ್ ಅವರನ್ನು ಈ ದ್ವೀಪ ಸಮೂಹಗಳನ್ನು ಅಭಯಧಾಮವೆ೦ದು ಘೋಷಿಸಲು ಮನಒಲಿಸಿದರು. ಕರ್ನಾಟಕ ರಾಜ್ಯದ ಅರಣ್ಯ ಇಲಾಖೆಯು ಈ ಪಕ್ಷಿಧಾಮದ ನಿರ್ವಹಣೆಯ ಜವಾಬ್ಧಾರಿಯನ್ನು ವಹಿಸಿದೆ ಅಲ್ಲದೆ ಇದರ ಪ್ರಗತಿಯ ದಿಟ್ಟಿನಲ್ಲಿ ಸುತ್ತಲಿನ ಖಾಸಗಿ ಭೂಪ್ರದೇಶಗಳನ್ನು ಕೊಂಡು ಕೊಂಡು, ಈ ಪಕ್ಷಿಧಾಮವನ್ನು ವಿಸ್ತರಿಸಿ, ರಕ್ಷಿಸಿ ಇದರ ಅಭಿವೃದ್ಧಿಗೂ ಪ್ರಯತ್ನಿಸುತ್ತಿದೆ.
ಪ್ರವಾಹ
[hlela | Hlela umthombo]ಮಳೆಗಾಲದಲ್ಲಿ, ಹತ್ತಿರದ ಕೃಷ್ಣರಾಜಸಾಗರ ಅಣೆಕಟ್ಟಿನಿ೦ದ ಅಧಿಕ ನೀರನ್ನು ಹೊರಬಿಟ್ಟಾಗ ಈ ದ್ವೀಪಸಮೂಹಗಳಿಗೆ ಅತಿಯಾದ ಪ್ರವಾಹದ ಭೀತಿಯಿರುತ್ತದೆ. ಅತಿಯಾದ ಪ್ರವಾಹವಿದ್ದಾಗ ಪ್ರವಾಸಿಗರನ್ನು ದೋಣಿಗಳ ಮೂಲಕ ಕರೆದೊಯ್ಯುವುದನ್ನು ನಿಷೇಧಿಸ ಲಾಗುತ್ತದೆ. ಕೇವಲ ದೂರದಿ೦ದಲೇ ಪಕ್ಷಿಗಳು ಗೂಡುಕಟ್ಟುವುದನ್ನು ವೀಕ್ಷಿಸಲು ಅನುಮತಿ ನೀಡಲಾಗುತ್ತದೆ. ಕಳೆದ ಕೆಲ ದಶಕಗಳಲ್ಲಿ ಆಗಾಗ ಉ೦ಟಾಗುವ ಪ್ರವಾಹಗಳಿ೦ದಾಗಿ ಮೂರು ದ್ವೀಪಗಳ ಕೆಲಭಾಗಗಳಿಗೆ ಧಕ್ಕೆಯಾಗಿದೆ.